ಸಚಿವ ಸ್ಥಾನಕ್ಕಾಗಿ ಸಿಎಂಗೆ ಒತ್ತಡ ಹಾಕಿದ ಹಾವೇರಿ ಶಾಸಕ ನೆಹರು ಓಲೇಕಾರ್

ಗುರುವಾರ, 9 ಜನವರಿ 2020 (10:47 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ಧತೆ ನಡೆಸುತ್ತಿರುವ ವೇಳೆ ಇದೀಗ ಸಚಿವ ಸ್ಥಾನಕ್ಕಾಗಿ ಹಾವೇರಿ ಶಾಸಕ ನೆಹರು ಓಲೇಕಾರ್ ಲಾಬಿ ನಡೆಸಿದ್ದಾರೆ.



ಶಾಸಕ ನೆಹರು ಓಲೇಕಾರ್ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ  ಸಚಿವ ಸ್ಥಾನಕ್ಕಾಗಿ ಒತ್ತಾಯಿಸಿದ್ದು, ಸಚಿವ ಸಂಪುಟ ವಿಸ್ತರಣೆಯ ವೇಳೆ ತನ್ನನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಈ ಹಿಂದೆ ಬೆಂಬಲಿಗರು, ಸ್ವಾಮೀಜಿಗಳ ಮೂಲಕ ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕಿದ ಶಾಸಕರು ಈ ಬಾರಿ ತಾವೇ ಖುದ್ದು ಸಿಎಂ ನ್ನು ಭೇಟಿ ಮಾಡಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ