ಆರೋಪಿಗಳು ರೂ. 1,000 ಮತ್ತು ರೂ. 500 ನೋಟುಗಳ ಕಂತೆಗಳನ್ನು ಜಾಕೆಟ್ ರೂಪದ ಬನಿಯನ್ನೊಳಗೆ ಅಡಗಿಸಿಟ್ಟುಕೊಂಡಿದ್ದರು. ತಪಾಸಣೆ ವೇಳೆ ಆರೋಪಿಗಳು ‘ನಮಗೆ ಶಸ್ತ್ರಚಿಕಿತ್ಸೆಯಾಗಿದೆ. ಹಾಗಾಗಿ ನಮ್ಮನ್ನು ಮುಟ್ಟಬೇಡಿ, ನೋವಾಗುತ್ತದೆ’ ಎಂದು ಹೇಳಿದ್ದಾರೆ. ಇದರಿಂದ ಅನುಮಾನ ಬಂದು, ಅವರನ್ನು ತಪಾಸಣೆ ಮಾಡಿದಾಗ ಹಣ ದೊರೆಯಿತು. ಗೋವಾದಿಂದ ಮಂಗಳೂರಿಗೆ ಅವರು ಈ ಹಣ ಸಾಗಿಸುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
‘ಈ ಹಣಕ್ಕೆ ಯಾವುದೇ ದಾಖಲೆ ಇಲ್ಲ. ಅಲ್ಲದೇ ಇದು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ತಿಳಿಯಬೇಕಿದೆ. ಆರೋಪಿಗಳು ಗುಜರಾತ್ನಿಂದ ಮಡಗಾಂವ್ಗೆ ರೈಲಿನಲ್ಲಿ ಬಂದು, ಅಲ್ಲಿಂದ ಏಜೆಂಟ್ ನೀಡಿದ ಹಣವನ್ನು ಮಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದರು. ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗುವುದು ಹಾಗೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದೇವರಾಜು ತಿಳಿಸಿದರು.