ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಎಚ್ ಸಿ ಮಹದೇವಪ್ಪ

ಸೋಮವಾರ, 2 ಜನವರಿ 2023 (20:34 IST)
ಕೆಲವರು ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿ ಎಂದು ಕಾಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಬಾರದೆಂದು ಬಯಸುತ್ತಿದ್ದಾರೆ. ಒಂದು ಪಕ್ಷಕ್ಕೆ ಬಹುಮತ ಬರದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಬೇಕೆಂದು ಬಯಸುತ್ತಾರೆ.ಅಂತಹ ಪಕ್ಷಗಳಿಗೆ ಏನೆಂದು ಕರೆಯಬೇಕು ಹೇಳಿ, ಸಮಯ ಸಾಧಕ ರಾಜಕಾರಣವೇ ಹಾಗೆ ಅಲ್ಲವೇ ಎಂದ ಜೆಡಿಎಸ್ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಇನ್ನೂ ಅವರಿಗೂ ಅವರ ಮಗನಿಗೂ ವಿಧಾನಸಭಾ  ಟಿಕೇಟ್ ವಿಚಾರವಾಗಿ ಮಾತನಾಡಿ ಎಲ್ಲಾ ವಿಚಾರವನ್ನ ಎಐಸಿಸಿ ತೀರ್ಮಾನ ಮಾಡುತ್ತೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ