ಮೊಮ್ಮಕ್ಕಳಿಬ್ಬರೂ ರಾಜಕೀಯಕ್ಕೆ ಬರುವುದು ಖಚಿತ ಎಂದ ಎಚ್ ಡಿ ದೇವೇಗೌಡ

ಗುರುವಾರ, 9 ನವೆಂಬರ್ 2017 (09:01 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್ ವರಿಷ್ಠ ದೇವೇಗೌಡ ತಮ್ಮ ಕುಟುಂಬದ ಕುಡಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಸ್ಪಷ್ಟ ನಿರ್ಧಾರ ಹೇಳಿಲ್ಲ.

 
ಆದರೆ ತಮ್ಮ ಮೊಮ್ಮಕ್ಕಳಾದ ಪ್ರಜ್ವಲ್ ಮತ್ತು ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರುವುದು ಖಚಿತ ಎಂದಿದ್ದಾರೆ. ಪ್ರಜ್ವಲ್ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ಸ್ಪರ್ಧೆಗೆ ಕುಮಾರಸ್ವಾಮಿ ಮತ್ತು ದೇವೇಗೌಡರಿಂದ ಹಸಿರು ನಿಶಾನೆ ಬಂದಿಲ್ಲ.

ಅತ್ತ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಯಾಂಡಲ್ ವುಡ್ ನಲ್ಲಿ ನಟನಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರನ್ನು ಸ್ಟಾರ್ ಪ್ರಚಾರಕನಾಗಿ ಬಳಸುವ ಇರಾದೆ ಪಕ್ಷಕ್ಕಿದೆ ಎನ್ನಲಾಗಿದೆ. ಹಾಗಿದ್ದರೂ ನಿಖಿಲ್ ಕೂಡಾ ರಾಜಕೀಯಕ್ಕೆ ಬರುತ್ತಾರೆ ಎಂದಿರುವ ಗೌಡರ ಮನದಲ್ಲಿ ಇವರಿಬ್ಬರನ್ನೂ ಕಣಕ್ಕಿಳಿಸುವ ಯೋಜನೆ ಇದೆಯಾ ಎನ್ನುವುದು ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ