ಸಿಡಿದ ಮೊಮ್ಮಗನಿಗೆ ಬುದ್ಧಿ ಹೇಳಿದ ದೇವೇಗೌಡರು

ಶುಕ್ರವಾರ, 13 ಅಕ್ಟೋಬರ್ 2017 (09:16 IST)
ಬೆಂಗಳೂರು: ಜೆಡಿಎಸ್ ಯುವ ನಾಯಕ, ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತೆ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದರು. ಇದೀಗ ತಾತ ಎಚ್ ಡಿ ದೇವೇಗೌಡ ಮತ್ತೊಮ್ಮೆ ಮೊಮ್ಮಗನಿಗೆ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.

 
ಇತ್ತೀಚೆಗೆಷ್ಟೇ ಪ್ರಜ್ವಲ್, ಜೆಡಿಎಸ್ ನಲ್ಲಿ ಬಕೆಟ್ ಸಂಸ್ಕೃತಿ ಇದೆ ಎಂದು ವಿವಾದವೆಬ್ಬಿಸಿದ್ದರು. ಇದರಿಂದದ ನೊಂದಿದ್ದ ಗೌಡರು ಮೊಮ್ಮಗನಿಗೆ ಕರೆ ಮಾಡಿ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.

ಮುಂಬರುವ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಮತ್ತು ಕುಮಾರಸ್ವಾಮಿ ಮಾತ್ರ ಗೌಡರ ಕುಟುಂಬದಿಂದ ಸ್ಪರ್ಧಿಸುವುದಾಗಿ ದೇವೇಗೌಡರು ಹೇಳಿದ್ದರು. ಇದೀಗ ಹುಣಸೂರಿನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಜ್ವಲ್ ಸಾರ್ವಜನಿಕವಾಗಿ ತಮ್ಮ ನಿರಾಸೆಯನ್ನು ಪಕ್ಷ ವಿರೋಧಿ ಹೇಳಿಕೆಗಳ ಮೂಲಕ ಹೊರಹಾಕುತ್ತಿದ್ದಾರೆ ಎಂದು ಇತರ ನಾಯಕರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ದೊಡ್ಡ ಗೌಡರು ಮೊಮ್ಮಗನಿಗೆ ಈ ರೀತಿ ವರ್ತನೆ ಸರಿಯಲ್ಲ ಎಂದು ಮತ್ತೊಮ್ಮೆ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ