HD Kumaraswamy: ಬಿಜೆಪಿ ಕಾಲದ ಹಗರಣ ತನಿಖೆಗೆ ಎಚ್ ಡಿ ಕುಮಾರಸ್ವಾಮಿ ಗರಂ

Krishnaveni K

ಶುಕ್ರವಾರ, 11 ಅಕ್ಟೋಬರ್ 2024 (12:35 IST)
ಬೆಂಗಳೂರು: ಬಿಜೆಪಿ ಸರ್ಕಾರ ಆಡಳಿತವಿದ್ದಾಗ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.

ರಾಜ್ಯ ಸರ್ಕಾರದ ನಡೆಯ ಬಗ್ಗೆ ತೀವ್ರ ಆಕ್ರೋಶವ್ಯಕ್ತಪಡಿಸಿರುವ ಕುಮಾರಸ್ವಾಮಿ ಕೊವಿಡ್ ಸಮಯದಲ್ಲಿ ನಡೆದಿದ್ದ ಹಗರಣಗಳ ತನಿಖೆಗೆ ಸರ್ಕಾರಕ್ಕೆ ಈಗ ನೆನಪಾಗಿದ್ದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಬಳಿಕ ಈಗ ಕೊವಿಡ್ ಕಾಲದ ಹಗರಣ ತನಿಖೆ ನಡೆಸುವ ಜರೂರತ್ತು ಏನಿತ್ತು ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇನ್ನು, ಸಿದ್ದರಾಮಯ್ಯ ಮುಡಾ ಹಗರಣದ ಬಗ್ಗೆಯೂ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ ತಮ್ಮ ಮೇಲೆ ಆರೋಪ ಬರುತ್ತದೆ ಎಂದಾಗ ಸಿದ್ದರಾಮಯ್ಯ ಸೈಟು ವಾಪಸ್ ಮಾಡಿದ ನಾಟಕವಾಡಿದರು. ಅಷ್ಟಕ್ಕೂ ಅದು ಅವರ ಸ್ವಂತ ಸೈಟು ಆಗಿರಲೇ ಇಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಸಿದ್ದರಾಮಯ್ಯ ವಾಪಸ್ ಮಾಡಿರುವ 14 ಸೈಟು ಏನು ಅವರು ಕಷ್ಟಪಟ್ಟು ಸಂಪಾದನೆ ಮಾಡಿರುವ ಸೈಟುಗಳಾ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಇತಿಹಾಸವನ್ನು ಅವರೇ ಹೇಳಬೇಕು ಎಂದು ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ