ಅಂಬರೀಷ್ ಭೇಟಿ ಹಿಂದಿನ ರಹಸ್ಯ ಬಹಿರಂಗಪಡಿಸಿದ ಎಚ್ ಡಿಕೆ

ಸೋಮವಾರ, 7 ಮೇ 2018 (07:46 IST)
ಬೆಂಗಳೂರು: ಭಾನುವಾರ ಬೆಳ್ಳಂ ಬೆಳಿಗ್ಗೆಯೇ ಕಾಂಗ್ರೆಸ್ ನಾಯಕ ರೆಬಲ್ ಸ್ಟಾರ್ ಅಂಬರೀಷ್ ಮನೆಗೆ ತೆರಳಿ ಮಾತುಕತೆ ನಡೆಸಿರುವ ವಿವರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.

ಮಂಡ್ಯ ಕ್ಷೇತ್ರದ ಟಿಕೆಟ್ ಸಿಕ್ಕರೂ ಸ್ಪರ್ಧೆಯಿಂದ ಹಿಂದೆ ಸರಿದಿದ್ದ ಅಂಬರೀಷ್ ಜತೆಗೆ ಕುಮಾರಸ್ವಾಮಿ ನಿನ್ನೆ ಮಾತುಕತೆ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ತನ್ನನ್ನು ಅವಮಾನ ಮಾಡಿತ್ತು ಎಂದು ಅಂಬಿ ಅಳಲು ತೋಡಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಮಾತುಕತೆಯ ವಿವರ ಬಹಿರಂಗಪಡಿಸಿದ್ದಾರೆ.

‘ಅಂಬರೀಷ್ ಗೆ ಯಾವುದೇ ಒತ್ತಡ ಹೇರಿಲ್ಲ. ಅವರನ್ನು ಭೇಟಿಯಾಗಿ ಬೆಂಬಲಿಸುವಂತೆ ಕೋರಿದ್ದೇನೆ ಅಷ್ಟೇ’ ಎಂದಿದ್ದಾರೆ. ಅಷ್ಟೇ ಅಲ್ಲದೆ, ಅಂಬರೀಷ್ ರನ್ನು ಕಡೆಗಣಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ‘ಸಿಎಂ ಸಿದ್ದರಾಮಯ್ಯಗೆ ಉಪಕಾರ ಮಾಡಿದವರನ್ನು ಸ್ಮರಿಸುವ ಗುಣವಿಲ್ಲ. ಅಂಬರೀಷ್, ಶ್ರೀನಿವಾಸ್ ಪ್ರಸಾದ್ ವಿಚಾರದಲ್ಲಿ ಆಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯವೇ’ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ