ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ

ಗುರುವಾರ, 2 ಮಾರ್ಚ್ 2017 (09:32 IST)
ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ ಕಾಡಿದೆ. ಇದರಿಂದಾಗಿ ಇಂದಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.


ತೀವ್ರ ಜ್ವರ ಮತ್ತು ಬಳಲಿಕೆಗೆ ತುತ್ತಾಗಿರುವ ಕುಮಾರಸ್ವಾಮಿಯನ್ನು ಪರೀಕ್ಷಿಸಿದ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸದ್ಯ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಕುಮಾರಸ್ವಾಮಿಗೆ ನಿನ್ನೆ ತಡರಾತ್ರಿಯಿಂದ ಆರೋಗ್ಯ ಹದಗೆಟ್ಟಿದೆ.

ಹೀಗಾಗಿ ಇಂದು ನಡೆಸಲುದ್ದೇಶಿಸಿದ್ದ ಸುದ್ದಿಗೋಷ್ಠಿಯನ್ನು ರದ್ದುಗೊಳಿಸಿದ್ದಾರೆ. ಸದ್ಯ ಅಲ್ಲಿಗೆ ಬಂದ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ