ರಿಲೀಸ್ ಆದ ಖುಷಿಗೆ ಇಂದೂ ಮುಂದುವರಿಯಲಿದೆ ಎಚ್ ಡಿ ರೇವಣ್ಣ ಟೆಂಪಲ್ ರನ್
ಇಂದು ರೇವಣ್ಣ ತವರು ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ಮನೆದೇವರು ಹರದನಹಳ್ಳಿಯ ನರಸಿಂಹಸ್ವಾಮಿ ದೇವಸ್ಥಾನ ಮತ್ತು ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಜೊತೆಗೆ ತವರಿನಲ್ಲಿ ಕಾರ್ಯಕರ್ತರನ್ನೂ ಭೇಟಿಯಾಗುವ ಸಾಧ್ಯತೆಯಿದೆ.
ನಿನ್ನೆ ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೇ ಕುಟುಂಬ ಸದಸ್ಯರು ಅವರನ್ನು ಭೇಟಿ ಮಾಡಿದ್ದಾರೆ. ಜೊತೆಗೆ ಬಿಜೆಪಿ ಶಾಸಕ ಮುನಿರತ್ನ ಕೂಡಾ ದೇವೇಗೌಡರ ನಿವಾಸಕ್ಕೆ ತೆರಳಿದ್ದರು. ಜೈಲಿನಿಂದ ಹೊರಬರುತ್ತಿದ್ದಂತೇ ತಮಗಾಗಿ ಕಾದು ಕುಳಿತಿದ್ದ ಕಾರ್ಯಕರ್ತರನ್ನು ನೋಡಿ ರೇವಣ್ಣ ಭಾವುಕರಾಗಿದ್ದರು.