ನಾನು ಗ್ರಾಮ ವಾಸ್ತವ್ಯ ಮಾಡಿದು ಜನರಿಗಾಗಿ

ಮಂಗಳವಾರ, 16 ನವೆಂಬರ್ 2021 (18:22 IST)
ಮುಖ್ಯಮಂತ್ರಿ ಆಗಿದ್ದಾಗ ನಾನು ಮಾಡಿದ ಗ್ರಾಮ ವಾಸ್ತವ್ಯಕ್ಕೆ ಮಹಾತ್ಮ ಗಾಂಧೀಜಿ ಅವರೇ ಸ್ಪೂರ್ತಿ ಮತ್ತು ಆದರ್ಶ. ಗ್ರಾಮ ವಾಸ್ತವ್ಯ ಎನ್ನುವುದು ನಾಟಕೀಯವಾಗಿ ಮಾಡಲಿಲ್ಲ. ಆತ್ಮತೃಪ್ತಿಗಾಗಿ, ಜನರ ಕೆಲಸ ಮಾಡುವುದಕ್ಕೆ ಕಾರ್ಯಕ್ರಮ ಜಾರಿಗೊಳಿಸಿದೆ' ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಪೇಜಾವರ ಶ್ರೀಗಳು ಹಾಗೂ‌ ಗ್ರಾಮ ವಾಸ್ತವ್ಯದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 'ನನ್ನ ಗ್ರಾಮ ವಾಸ್ತವ್ಯದಿಂದ ಅನೇಕರಿಗೆ ಅನುಕೂಲವಾಗಿದೆ. ಯಾರನ್ನೋ ಮೆಚ್ಚಿಸುವುದಕ್ಕೆ ನಾನು ಗ್ರಾಮ ವಾಸ್ತವ್ಯ ಮಾಡಲಿಲ್ಲ. ಆ ವಿಚಾರಗಳ ಬಗ್ಗೆ ಹಂಸಲೇಖ ಅವರು ಮಾತನಾಡುವ ಅಗತ್ಯವಿರಲಿಲ್ಲ. ಮುಖ್ಯವಾಗಿ ಧರ್ಮ ಹಾಗೂ ಧಾರ್ಮಿಕ ಗುರುಗಳ ಬಗ್ಗೆ ಹೀಗೆ ಮಾತನಾಡುವುದು ಸರಿಯಲ್ಲ' ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ