'ಸಿದ್ದು, HDK ಹೇಳಿಕೆಗಳಿಗೆ ನಿಖರತೆ ಇಲ್ಲ'

ಶುಕ್ರವಾರ, 8 ಏಪ್ರಿಲ್ 2022 (17:02 IST)
ಸಿಎಂ ಬೊಮ್ಮಯಿ ಮೌನ ಬಸವಣ್ಣ ಎಂಬ ಪ್ರತಿಪಕ್ಷಗಳ ಟೀಕೆಗೆ ಸಿಎಂ ಬೊಮ್ಮಾಯಿ ಮಾತನಾಡುವ ಬಸವಣ್ಣ ಅಲ್ಲ, ಅವ್ರು ದುಡಿವ ಬಸವಣ್ಣ. ದುಡಿಮೆಯಿಂದ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಸವಣ್ಣ ಎಂದು  ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಅಲ್‌ ಖೈದಾ ನಾಯಕನ ವಿಡಿಯೋ ಬಗ್ಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ RSS ಕೈವಾಡ ಇದೆ ಎಂದು ಆರೋಪ ಮಾಡಿದ್ದರು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಮಾತಿನ ಭರದಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೋಡಿ ಮಠದ ಸ್ವಾಮೀಜಿ ಇವರ ಹೇಳಿಕೆಗಳಿಗೆ ನಿಖರತೆ, ಸ್ಪಷ್ಟತೆ ಇರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಗಳನ್ನ ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ