ಸಾಲಬಾಧೆ ತಾಳಲಾರದೆ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಗುರುವಾರ, 11 ನವೆಂಬರ್ 2021 (20:13 IST)
ಬೆಂಗಳೂರು: ಸಾಲಬಾಧೆ ತಾಳಲಾರದೆ ಹೆಡ್ ಕಾನ್ಸ್​ಟೇಬಲ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದುಬಾಸಿಪಾಳ್ಯದ‌ ನಿವಾಸಿ ಹೆಡ್ ಕಾನ್‌ಸ್ಟೇಬಲ್ ಕುಮಾರ್ (36) ಮೃತರು.
ಪಶ್ವಿಮ ವಿಭಾಗದ ಸಶಸ್ತ್ರ ವಿಭಾಗದಲ್ಲಿ ಹೆಡ್ ಕಾನ್​ಸ್ಟೇಬಲ್‌ ಆಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ಉಳ್ಳಾಲದಲ್ಲಿರುವ ಸಿಎಆರ್ ಕಚೇರಿಗೆ ಸೋಮವಾರ ಕರ್ತವ್ಯಕ್ಕೆಂದು ತೆರಳಿದ್ದರು. ಯಾರೂ ಇಲ್ಲದಿರುವಾಗ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ಕಾರಣವಾಯ್ತು ಸಾಲಬಾಧೆ: ವಿಪರೀತ ಸಾಲ ಬಾಧೆಯಿಂದ ತತ್ತರಿಸಿದ್ದ ಕುಮಾರ್, ಡೆತ್ ನೋಟ್​ನಲ್ಲಿಯೂ ಸಾವಿಗೆ ಸಾಲವೇ ಪ್ರಮುಖ ಕಾರಣ ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ರವಾನಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ