ಬೆಂಗಳೂರು ನಗರದಾದ್ಯಂತ ಭಾರಿ ಮಳೆ; ಬಿಬಿಎಂಪಿ ಕಮಿಷನರ್ ಗೆ ಸಿಎಂ ಕರೆ

ಶನಿವಾರ, 24 ಅಕ್ಟೋಬರ್ 2020 (11:33 IST)
ಬೆಂಗಳೂರು : ಬೆಂಗಳೂರು ನಗರದಾದ್ಯಂತ ಭಾರಿ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಜನರು ಮನೆಮಠ ಕಳೆದುಕೊಂಡು ಪರದಾಡುತ್ತಿದ್ದಾರೆ.

ಹೌದು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರವೇ ನಲುಗಿ ಹೋಗಿದೆ. ಅಲ್ಲದೇ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಕಮಿಷನರ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಕರೆ ಮಾಡಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಸಿಎಂ ಕರೆ  ಮಾಡಿ, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಸಿದ್ದಾರೆ. ಅಲ್ಲದೇ  ಇನ್ನೂ 2 ದಿನ ಬಾರೀ ಮಳೆ ಹಿನ್ನಲೆ ಎಚ್ಚರ ವಹಿಸಿ ಎಂದು  ಮುನ್ನೆಚ್ಚರಿಕೆ ಕ್ರಮಕ್ಕೆ ಸಿಎಂ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ