ದ.ಕನ್ನಡ, ಕೇರಳ ಗಡಿಭಾಗಗಳಲ್ಲಿ ಇಂದು ಭಾರೀ ಮಳೆ

ಶನಿವಾರ, 15 ಮೇ 2021 (10:31 IST)
ಮಂಗಳೂರು: ಕೇರಳ ಗಡಿಭಾಗ, ಮಂಗಳೂರು ಸೇರಿದಂತೆ ದ.ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುತ್ತಿದೆ.


ಬೆಳಗ್ಗಿನಿಂದಲೇ ಈ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೇರಳದ ಕೆಲವು ಭಾಗಗಳಲ್ಲಿ ಈಗಾಗಲೇ ಆರೆಂಜ್, ರೆಡ್ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಬೆನ್ನಲ್ಲೇ ಅವಧಿಗೆ ಮುನ್ನವೇ ಮುಂಗಾರು ಮಳೆ ಪ್ರವೇಶಿಸಲಿದೆ ಎಂಬ ಹವಾಮಾನ ಇಲಾಖೆಯ ಸೂಚನೆಯ ಬೆನ್ನಲ್ಲೇ ಭಾರೀ ಮಳೆಯಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಜೊತೆಗೆ ನೈಋತ್ಯ ಮಾರುತ ಪ್ರಬಲಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮಳೆ ಜೋರಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ