ಹೆಬ್ಬಾಳದಲ್ಲಿ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಮುಂದಾದ ಬಿಜೆಪಿ

ಶನಿವಾರ, 6 ಫೆಬ್ರವರಿ 2016 (18:09 IST)
ಹೆಬ್ಬಾಳದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಕೇಂದ್ರ ಸಚಿವರು ಪ್ರಚಾರಕಣಕ್ಕೆ ಇಳಿದಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆಯಲು ಬಿಜೆಪಿ ಮುಂದಾಗಿದೆ.
 
ತೆರೆದ ಜೀಪಿನಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವರಾದ ಅನಂತ್ ಕುಮಾರ್  ಮತ್ತು ಡಿ.ವಿ.ಸದಾನಂದಗೌಡ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು.
 
ಕಾಂಗ್ರೆಸ್ ಪಕ್ಷ ಜನವಿರೋಧಿ, ರೈತ ವಿರೋಧಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಯಾವತ್ತೂ ಜನಪರ ಯೋಜನೆಗಳನ್ನು ಜಾರಿಗೆ ತರಲಿಲ್ಲ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.
 
ಹೆಬ್ಬಾಳ ಕ್ಷೇತ್ರದ ಜನತೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ನಿರ್ಧರಿಸಿದ್ದು,ಅದನ್ನು ತಡೆಯುವ ಶಕ್ತಿ ಯಾವುದೇ ಕಾಂಗ್ರೆಸ್ ಮುಖಂಡರಿಗಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ