ಕಾಂಗ್ರೆಸ್ ವಿರುದ್ಧ ಹೆಗೆಡೆ ವಾಗ್ದಾಳಿ

ಭಾನುವಾರ, 22 ಜುಲೈ 2018 (19:55 IST)
ಮುಂಬರುವ ಚುನಾವಣೆಯಲ್ಲಿಯೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಹುಜನರ ಅಭಿಪ್ರಾಯವೂ ಇದೆ ಆಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ದಾವಣಗೆರೆಯಲ್ಲಿ ನಮೋ ಭಾರತ್  ಸಂಘಟನೆ ಉದ್ಘಾಟಿಸಿ ಮಾತನಾಡಿದ ಅನಂತ್ ಕುಮಾರ್ ಹೆಗೆಡೆ, ಲೋಕಸಭೆಯಲ್ಲಿ ನಿನ್ನೆ ನಡೆದಿರುವ ಪ್ರವಸನವೇ ಸಾಕ್ಷಿಯಾಗಿದೆ. ಕೌಟುಂಬಿಕ ಪರಂಪರೆ ಸೀಮಿತ ಚೌಕಟ್ಟಿನಲ್ಲಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಭುತ್ವದ ವಿರುದ್ಧವಾಗಿ ಅಪ್ರಭುತ್ವದ ಹಣಾಹಣಿ ನಡೆದಿತ್ತು. ಅದರಲ್ಲಿ ಬಿಜೆಪಿ ಜಯ ದಾಖಲಿಸಿದೆ.

ಮುಂದಿನ ಚುನಾವಣೆಯಲ್ಲಿಯೂ ಕೂಡ ಬಿಜೆಪಿಗೆ ಗೆಲುವು ಲಭಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ