ಅರಬ್ಬೀ ಸಮುದ್ರಕ್ಕೆ ಅಪ್ಪಳಿಸಲಿರುವ ಕ್ಯಾರ್ ಚಂಡಮಾರುತ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಹೈ ಅಲರ್ಟ್ ಘೋಷಣೆ

ಶುಕ್ರವಾರ, 25 ಅಕ್ಟೋಬರ್ 2019 (10:41 IST)

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಅಪ್ಪಳಿಸುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ  ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

 




 

50-80ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಈಗಾಗಲೇ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

 

ಕರ್ನಾಟಕದ ಕರಾವಳಿ ಜಿಲ್ಲೆಗಳ  ಜೊತೆಗೆ ಮಹಾರಾಷ್ಟ್ರ ಕೊಂಕಣ  ಮತ್ತು ಗೋವಾ ತೀರದ ಪ್ರದೇಶಗಳಲ್ಲೂ ಕ್ಯಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ