ಬಿಎಸ್‌ವೈ-ಈಶ್ವರಪ್ಪರ ಕಲಹವನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ: ಸದಾನಂದಗೌಡ

ಶುಕ್ರವಾರ, 20 ಜನವರಿ 2017 (15:56 IST)
ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ನಡುವಿನ ವೈಮನಸ್ಸನ್ನು ಕೇಂದ್ರ ನಾಯಕರು ಗಮನಕ್ಕೆ ತರಲಾಗಿದ್ದು, ಅವರು ಆದಷ್ಟು ಬೇಗ ಸಮಸ್ಯೆ ಪರಿಹರಿಸಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.
 
ಬೆಂಗಳೂರು ಉತ್ತರ ವಲಯದ ಸರಕಾರಿ ಪ್ರಥಮಿಕ ಶಾಲೆಯ ನೂತನ ಕಟ್ಟದ ಉದ್ಘಾಟಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನಿರೀಕ್ಷೆಗೂ ಮೀರಿ ಕೆಲವು ಬೆಳವಣಿಗೆ ನಡೆಯುತ್ತಿವೆ. ನಾವ್ಯಾರು ಕಣ್ಮುಚ್ಚಿ ಕೂರುವುದಕ್ಕೆ ಸಾಧ್ಯವಿಲ್ಲ. ಈ ಕುರಿತು ನಾಳೆ ನಡೆಯುವ ರಾಜ್ಯ ಕಾರ್ಯಕಾರಣಿಗಳ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು. 
 
ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಪಕ್ಷದ ಹಿರಿಯ ನಾಯಕರಾದ ಅವರು, ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ವೈಯಕ್ತಿಕ ವಿಷಯಗಳನ್ನು ಬದಿಗಿಟ್ಟು ಪಕ್ಷದ ಕೆಲಸದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು. 
 
ರಾಜ್ಯ ಬಿಜೆಪಿ ಘಟಕದ ವಿದ್ಯಮಾನಗಳ ಕುರಿತು ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ. ಉಭಯ ನಾಯಕರ ನಡುವಿನ ವೈಮನಸ್ಸಿನ ಕುರಿತು ಕೇಂದ್ರ ನಾಯಕರು ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.
 
ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರ......
 
ವಿ.ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎನ್ನುವ ವಿಚಾರ ಮಾಧ್ಯಮಗಳಿಂದ ಗೊತ್ತಾಯ್ತು. ಈ ಕುರಿತು ಇಂದು ಸೋಮಣ್ಣ ಅವರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ