ಪೊಲೀಸ್ ಮುಷ್ಕರಕ್ಕೆ ಕರೆ ನೀಡಿದ್ದ ಶಶಿಧರ್‌ಗೆ ಹೈಕೋರ್ಟ್‌ನಿಂದ ಜಾಮೀನು

ಗುರುವಾರ, 25 ಆಗಸ್ಟ್ 2016 (10:52 IST)
ರಾಜ್ಯಾದ್ಯಂತ ಪೊಲೀಸ್ ಮುಷ್ಕರಕ್ಕೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಶಿಧರ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
 
ಹೈಕೋರ್ಟ್ ಏಕಸದಸ್ಯ ಪೀಠ 50 ಸಾವಿರ ರೂಪಾಯಿ ಬಾಂಡ್ ಹಾಗೂ ಶ್ಯೂರಿಟಿ ಪಡಿದು ಆರೋಪಿ ಶಶಿಧರ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.
 
ಪೊಲೀಸ್ ಮುಷ್ಕರಕ್ಕೆ ಕರೆ ನೀಡಬಾರದು. ಅನುಮತಿ ಪಡೆಯದೆ ಕೋರ್ಟ್ ವ್ಯಾಪ್ತಿ ದಾಟಬಾರದು. ಪೊಲೀಸರ ಸಭೆ ಕರೆಯಬಾರದು ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶ ಮಾಡದಂತೆ ಹೈಕೋರ್ಟ್ ಶಶಿಧರ ಅವರಿಗೆ ಸೂಚನೆ ನೀಡಿದೆ.
 
ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಅವರು ರಾಜ್ಯಾದ್ಯಂತ ಪೊಲೀಸ್ ಮುಷ್ಕರಕ್ಕೆ ಕರೆ ನೀಡಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ