ಎಸಿಬಿ ರದ್ದು ಗೊಳಿಸಿದ ಹೈಕೋರ್ಟ್ ನಿರ್ಧಾರ ಉತ್ತಮ - ನಿ. ನ್ಯಾ ಸಂತೋಷ ಹೆಗ್ಡೆ ಪ್ರತಿಕ್ರಿಯೆ

ಗುರುವಾರ, 11 ಆಗಸ್ಟ್ 2022 (20:49 IST)
ಹೈಕೋರ್ಟ್ ಅದೇಶ ನನಗೆ ಬಹಳ ಸಂತೋಷ ತಂದಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. ಉತ್ತಮವಾದ ನಿರ್ಧಾರ ತೆಗೆದುಕೊಂಡಿದ್ದಾರೆ.ಅದರೆ ಲೋಕಾಯುಕ್ತಕ್ಕೆ ಅಧಿಕಾರವನ್ನು ನೀಡಬೇಕು.ಜೊತೆಗೆ ಉತ್ತಮ ಅಧಿಕಾರಿಗಳನ್ನು ಕೂಡ ನೇಮಿಸಬೇಕು.ಅಧಿಕಾರಿಗಳ ನೇಮಕದಲ್ಲೂ ಕೂಡ ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನ ನೇಮಕ ಮಾಡಬಾರದೆಂದು ಹೇಳಿದ್ದಾರೆ
 
ಇನ್ನು ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನ ನೇಮಕ ಮಾಡಿಕೊಳ್ಳಬೇಕು.ಜೊತೆಗೆ ಲೋಕಾಯುಕ್ತಕ್ಕೆ ಕೇವಲ ಅಧಿಕಾರ ನೀಡೋದಲ್ಲ.ಅದಕ್ಕೆ ಬೇಕಾದ ಸೌಲಭ್ಯಗಳನ್ನು ನೀಡಬೇಕು ಹಾಗೇ ಲೋಕಾಯುಕ್ತರು ಕೊಟ್ಟ ಜವಾಬ್ದಾರಿ ಚನ್ನಾಗಿ ನಿರ್ವಹಿಸಬೇಕು.ಎಲ್ಲಾ ಅಧಿಕಾರ ಸೌಲಭ್ಯ ವನ್ನು ಕೂಟ್ಟ ನಂತರ ಉತ್ತಮವಾಗಿ ನಿರ್ವಹಿಸಬೇಕು.ಇಲ್ಲವಾದ್ರೇ ನಾನೇ ವಿರೋಧ ಮಾಡುತ್ತೇನೆ ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ