ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮನ್ಸ್: ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬುಧವಾರ, 20 ಆಗಸ್ಟ್ 2014 (12:01 IST)
1998, 99, 2004ಕ ಕೆಪಿಎಸ್‌ಸಿ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮನ್ಸ್ ನೀಡಲು ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಕುರಿತು ಸಾರ್ವಜನಿಕ ಪ್ರಕಟಣೆ ನೀಡಲು ಸೂಚನೆ ನೀಡಿದ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿದರು.  ವಿಚಾರಣೆಯಾಗಿ ಅಂತಿಮ ತೀರ್ಪು ಬರುವವರೆಗೆ ಈ ಅಭ್ಯರ್ಥಿಗಳು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಆಯ್ಕೆಯಾಗಿ ಈಗಾಗಲೇ ಹುದ್ದೆ ನಿರ್ವಹಿಸುತ್ತಿರುವ ಉದ್ಯೋಗಿಗಳ ಭವಿಷ್ಯ ಕೋರ್ಟ್ ತೀರ್ಪನ್ನು ಆಧರಿಸಲಿದೆ.  2011ರ ಕೆಪಿಎಸ್‌ಸಿ ನೇಮಕಾತಿ ರದ್ದತಿ ನಡುವೆ 1998, 99, 2004ರ ಕೆಪಿಎಸ್‌ಸಿ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಲಾಗಿತ್ತು. ಏತನ್ಮದ್ಯೆ 2011ರ ನೇಮಕಾತಿಯಲ್ಲಿ ಕೆಪಿಎಸ್‌ಸಿಯ ಇತರ 6 ಮಂದಿ ಸದಸ್ಯರನ್ನು ಅಮಾನತುಗೊಳಿಸಿ ಎಂದು ಕಾಂಗ್ರೆಸ್ ವಕ್ತಾರ ದಿವಾಕರ್ ಆಗ್ರಹಿಸಿದ್ದಾರೆ.

6ಮಂದಿ ಸದಸ್ಯರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಸದಸ್ಯರು ಲೂಟಿ ಮಾಡಿದ ಹಣ ಪ್ರಾದೇಶಿಕ ಪಕ್ಷಗಳಿಗೆ ಹಂಚಿಕೆಯಾಗಿದೆ. ಜೆಡಿಎಸ್ ಪಕ್ಷಕ್ಕೂ ಹಣ ಹಂಚಿಕೆಯಾಗಿದೆ ಎಂದು ದಿವಾಕರ್ ತಿಳಿಸಿದರು. 

ವೆಬ್ದುನಿಯಾವನ್ನು ಓದಿ