ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬುಧವಾರ, 28 ಜೂನ್ 2017 (15:50 IST)
ರಾಜ್ಯದ ಜನತೆಯ ಮೇಲೆ ಬಲವಂತವಾಗಿ ಹಿಂದಿ ಹೇರುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರಭಾಷೆಯೂ ಅಲ್ಲ. ಕೆಲ ರಾಜ್ಯಗಳಲ್ಲಿ ಮಾತ್ರ ಮಾತನಾಡುವ ಭಾಷೆಯಾಗಿದೆ ಅಷ್ಟೆ. ಅದನ್ನು ದೇಶಾದ್ಯಂತ ಹೇರಿಕೆ ಮಾಡುವುದು ಅಸಹನೀಯ ಎಂದು ತಿಳಿಸಿದ್ದಾರೆ.
 
ನಮ್ಮ ಮೆಟ್ರೋದಲ್ಲಿ ತ್ರಿಭಾಷಾ ಸೂತ್ರದಂತೆ ಮೂರು ಭಾಷೆಗಳ ಫಲಕಗಳನ್ನು ಬಳಸಲಾಗಿದೆ. ನಮ್ಮ ಮೆಟ್ರೋಗೆ ಕೇಂದ್ರಕ್ಕಿಂತ ಹೆಚ್ಚಿನ ಅನುದಾನವನ್ನು ರಾಜ್ಯ ಸರಕಾರ ನೀಡಿದೆ ಎಂದು ತಿರುಗೇಟು ನೀಡಿದರು 
 
ಆದ್ದರಿಂದ, ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಮಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ