ಹಿಂದೂ-ಮುಸ್ಲಿಮರನ್ನು ಬದುಕಲು ಬಿಡುತ್ತಿಲ್ಲ-ಆರಗ ಜ್ಞಾನೇಂದ್ರ

ಭಾನುವಾರ, 8 ಅಕ್ಟೋಬರ್ 2023 (16:00 IST)
ಕಾಂಗ್ರೆಸ್ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮಗೆ ಮತ ಕೊಡುವ ಸಮಾಜ ವಿದ್ರೋಹಿಗಳನ್ನು ಕ್ಷಮಿಸುವ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಖಾರವಾಗಿ ಪ್ರಶ್ನಿಸಿದ್ದಾರೆ. ಎಲ್ಲಾ ಮುಸ್ಲಿಮರು ಕೆಟ್ಟವರೆಂದು ನಾನು ಹೇಳುತ್ತಿಲ್ಲ. ಎಲ್ಲ ಹಿಂದೂಗಳು ಒಳ್ಳೆಯವರೆಂದು ಹೇಳುವುದಿಲ್ಲ. ಆದರೆ, ಹಿಂದೂ-ಮುಸ್ಲಿಮರ ನಡುವಿನ ಅಂತರ ಜಾಸ್ತಿಯಾಗಲು ಇದೆಲ್ಲಾ ಕಾರಣವಾಗಬಾರದು ಅಂತಾ ಆರಗ ಜ್ಞಾನೇಂದ್ರ ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ