ಬೈಕ್ ಟಚ್ ಆಗಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ನಡುವೆ ದಾಳಿ

Krishnaveni K

ಮಂಗಳವಾರ, 28 ಮೇ 2024 (10:53 IST)
ಮಂಡ್ಯ:  ಬೈಕ್ ಓವರ್ ಟೇಕ್ ಮಾಡಿದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರು ಮುಸ್ಲಿಂ ಯುವಕರು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ವಿಚಾರ ಈಗ ನಾಗಮಂಗಲ ತಾಲೂಕು ಬೆಳ್ಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ.

ಓವರ್ ಟೇಕ್ ಮಾಡುವಾಗ ಟಚ್ ಆಗಿತ್ತೆಂದು ಅಭಿಲಾಷ್ ಎಂಬ ಯುವಕ ಇಬ್ಬರು ಮುಸ್ಲಿಮ್ ಯುವಕರನ್ನು ಪ್ರಶ್ನೆ ಮಾಡಿದ್ದ. ಇಬ್ಬರ ನಡುವೆ ವಾಗ್ವಾದವಾಗಿತ್ತು. ಇದೇ ಕಾರಣಕ್ಕೆ ಮುಸ್ಲಿಮ್ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ನಡೆಸಿದೆ.

ಘಟನೆಯಲ್ಲಿ ಗಾಯಗೊಂಡು ಅಭಿಲಾಷ್ ನನ್ನು ಆದಿಚುಂಚನಗಿರಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಇದೊಂದು ರೀತಿಯಲ್ಲಿ ಕೋಮು ಸಂಘರ್ಷಕ್ಕೆಡೆ ಮಾಡಿಕೊಟ್ಟಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನಿಸಲು ಪ್ರಯತ್ನಿಸಿದ್ದಾರೆ. ಸಣ್ಣ ವಿಚಾರವನ್ನಿಟ್ಟುಕೊಂಡು ಒಬ್ಬ ಯುವಕನ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಈಗ ಬಿಗುವಿನ ವಾತಾವರಣ ಉಂಟಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ