ಮೃತರೆಲ್ಲರೂ ಮಿನಿಲಾರಿಯಲ್ಲಿ ಪ್ರಯಾಣಿಸುತ್ತಿದ್ದು ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಗ್ರಾಮದಲ್ಲಿ ಮದುವೆ ನಿಶ್ಚಿತಾರ್ಥ ಮುಗಿಸಿ ಸ್ವಗ್ರಾಮ ಆಶನಾಳಕ್ಕೆ ಹಿಂತಿರುಗುತ್ತಿದ್ದರು. ಗ್ರಾಮ ತಲುಪಲು ಇನ್ನು 5 ಕೀಲೋಮೀಟರ್ ಇರುವಾಗ ಎದುರಿನಿಂದ ಬಂದ ಟ್ಯಾಂಕ್ ವಾಹನ ಮಿನಿಲಾರಿಗೆ ಗುದ್ದಿದೆ. ಅಪಘಾತದ ರಭಸಕ್ಕೆ ಮಿನಿಲಾರಿ ನಜ್ಜುಗುಜ್ಜಾಗಿದ್ದು ಅದರಲ್ಲಿದ್ದ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದರಲ್ಲಿ ಮೂವರು ಒಂದೇ ಕುಟುಂಬದವರಾಗಿದ್ದಾರೆ. ವಾಹನದಲ್ಲಿ ಅದರಲ್ಲಿ 50ಕ್ಕೂ ಹೆಚ್ಚು ಮಂದಿ ಇದ್ದರೆನ್ನಲಾಗುತ್ತಿದೆ.