ಚಿತ್ರದುರ್ಗದಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಗುರುವಾರ, 11 ಫೆಬ್ರವರಿ 2016 (09:09 IST)
ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದ್ದು ಕ್ರೂಸರ್‌‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಕ್ರೂಸರ್‌ನಲ್ಲಿದ್ದವರು ಬೆಂಗಳೂರಿನಿಂದ ಧಾರವಾಡಕ್ಕೆ ಹಿಂದಿರುಗುತ್ತಿದ್ದರು ಎಂದು ಹೇಳಲಾಗುತ್ತಿದೆ.
 
ಮೃತರನ್ನು ಮಂಜುನಾಥ್‌ (20), ಸಂತೋಷ್‌‌ (20), ಚಂದ್ರು (20), ಸಂಜೀವ್ ಎಂದು ಗುರುತಿಸಲಾಗಿದ್ದು ಇವರು ಧಾರವಾಡ ಮೂಲದವರಾಗಿದ್ದಾರೆ. 
 
ಘಟನೆಯ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ