ಕಾರ್‌ಗೆ ಸರ್ಕಾರಿ ಬಸ್ ಡಿಕ್ಕಿ: ದಂಪತಿ ದುರ್ಮರಣ

ಭಾನುವಾರ, 21 ಫೆಬ್ರವರಿ 2016 (16:28 IST)
ಕಾರ್‌ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಬ್ಬರು ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
 
ನಗರದ ತಡಸ ಕ್ರಾಸ್ ಬಳಿ ಈ ಘಟನೆ ನಡೆದಿದ್ದು ಕಾರಿಗೆ ಹಿಂದಿನಿಂದ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ದಂಪತಿಗಳಾದಶಂಕರ್ (32) ಮತ್ತು ಜಯಮಾಲಾ(30 ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
 
ಗಾಯಗೊಂಡವರನ್ನು ಅಶ್ವಿನಿ ಮತ್ತು ಪ್ರಿಯಾಂಕ ಎಂದು ಗುರುತಿಸಲಾಗಿದ್ದು ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 
 

ವೆಬ್ದುನಿಯಾವನ್ನು ಓದಿ