ಕಳ್ಳತನ ಆಪಾದನೆಗೆ ಮನನೊಂದು ಮಹಿಳೆ ಆತ್ಮಹತ್ಯೆ

ಶನಿವಾರ, 12 ಫೆಬ್ರವರಿ 2022 (09:00 IST)
ಬೆಂಗಳೂರು: ಕಳ್ಳತನ ಆಪಾದನೆಯಿಂದ ಮನನೊಂದ ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಕೆ.ಆರ್ ಪುರ ನಿವಾಸಿ 40 ವರ್ಷದ ಉಮಾ ಆತ್ಮಹತ್ಯೆಗೆ ಶರಣಾದವರು. ಅವರು ಮನೆ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನಾಭರಣ ಕಳುವಾಗಿತ್ತು. ಈ ಸಂಬಂಧ ಉಮಾ ಮೇಲೆ ಸಂಶಯದಿಂದ ಮನೆ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಉಮಾರನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.

ಇದರಿಂದ ಮನನೊಂದ ಉಮಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಮುನ್ನ ವಿಡಿಯೋ ಮಾಡಿಕೊಂಡಿದ್ದ ಉಮಾ ತನ್ನ ಮೇಲೆ ಆಪಾದನೆ ಹೊರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ