'ಕಾಂಪ್ಲೇನ್ ಬಾಯ್' ಪ್ರಜ್ವಲ್‌ಗೆ ಮೋದಿ ಹೇಗೆ ಕಷ್ಟ ಕೊಡುತ್ತಾರೆ: ಕಾಂಗ್ರೆಸ್ ಲೇವಾಡಿ

Sampriya

ಶನಿವಾರ, 11 ಮೇ 2024 (18:43 IST)
Photo Courtesy X
ಬೆಂಗಳೂರು: ಪ್ರಧಾನಿ ಮೋದಿಗೆ ಸಂಸದ ಪ್ರಜ್ವಲ್ ರೇವಣ್ಣ "ಕಾಂಪ್ಲೇನ್ ಬಾಯ್'' ಯಾಕೆಂದರೆ ಪ್ರಜ್ವಲ್ ರೇವಣ್ಣ ಗೆದ್ದರೆ ಮೋದಿಗೆ ಶಕ್ತಿ ಬರುತ್ತದೆ. ಆದ್ದರಿಂದ ಕಾಂಪ್ಲೇನ್ ಬಾಯ್‌ಗೆ ಮೋದಿ ಹೇಗೆ ಕಷ್ಟ ಕೊಡುತ್ತಾರೆ ಎಂದು ಕಾಂಗ್ರೆಸ್ ಲೇವಾಡಿ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್‌, ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡಿದರೆ ಅನಿವಾರ್ಯವಾಗಿ ದೇಶಕ್ಕೆ ಮರಳಬೇಕಾಗುತ್ತದೆ, ಆದರೆ ಕೇಂದ್ರ ರದ್ದು ಮಾಡಲು ಮುಂದಾಗುತ್ತಿಲ್ಲ. ಈ ಮೂಲಕ ಪ್ರಧಾನಿ ಮೋದಿಯೇ ಪ್ರಜ್ವಲ್‌ಗೆ ರಕ್ಷಣೆ ನೀಡುತ್ತಿದ್ದಾರೆ. ಇದಕ್ಕೆ ಯಾವುದೇ ಪುರಾವೆ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು, ಆದರೆ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಪ್ರಧಾನಿ ಮೋದಿಗೆ ಪ್ರಜ್ವಲ್ ರೇವಣ್ಣ "ಕಾಂಪ್ಲೇನ್ ಬಾಯ್" ಏಕೆಂದರೆ,   ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿದರೆ ಮೋದಿ ಶಕ್ತಿ ಬರುತ್ತದೆಯಂತೆ.  ಇಂತಹ ಕಾಂಪ್ಲೇನ್ ಬಾಯ್‌ಗೆ ಮೋದಿ ಕಷ್ಟ ಕೊಡಬಲ್ಲರೆ ಎಂದು ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ