ಗಡಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ದಿನಾಚರಣೆ

ಸೋಮವಾರ, 10 ಡಿಸೆಂಬರ್ 2018 (17:59 IST)
ಗಡಿ ಜಿಲ್ಲೆಯಲ್ಲಿ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಆಚರಣೆ ಮಾಡಲಾಯಿತು.

ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಚಾಮರಾಜನಗರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ  ಆಚರಿಸಲಾಯಿತು.

ಚಾಮರಾಜನಗರದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು  ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಉದ್ಘಾಟಿಸಿ, ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಸಹಕಾರ ನೀಡಬೇಕೆಂದು ಪ್ರತಿಜ್ಞಾವಿಧಿ ಭೋದಿಸಿದರು.

ಬಳಿಕ ಮಾತನಾಡಿದ ಅವರು, ಮಾನವ ಹಕ್ಕುಗಳ ಕಾಯಿದೆಯಡಿ ಎಲ್ಲರಿಗೂ ಸಮನಾಗಿ, ಶಿಕ್ಷಣ, ಸಾಂಸ್ಕೃತಿಕ, ಜಾತ್ಯತೀತ, ನ್ಯಾಯ ನೀಡಬೇಕಾಗಿದೆ ಎಂದರು.

ಈ ಎಲ್ಲಾ ಹಕ್ಕುಗಳನ್ನ ಪಡೆಯಬೇಕಾದರೆ ಶಿಕ್ಷಣ ಅತ್ಯವಶ್ಯಕ ಹಾಗಾಗಿ ಪ್ರತಿಯೂಬ್ಬರೂ ಕಡ್ಡಾಯವಾಗಿ ವಿದ್ಯೆ ಪಡೆಯಬೇಕೆಂದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ