ಗಂಡ-ಹೆಂಡ್ತಿ ಜಗಳದಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ !

ಗುರುವಾರ, 3 ಆಗಸ್ಟ್ 2023 (09:50 IST)
ಬೆಂಗಳೂರು : ಗಂಡ-ಹೆಂಡತಿ ಜಗಳದ ನಡುವೆ ಕೂಸು ಬಡವಾಯ್ತು ಅನ್ನೋ ಮಾತಿದೆ. ಆದರಿಲ್ಲಿ ಇವರಿಬ್ಬರ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಬೆಂಗಳೂರಿನ ಕೊಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
 
ಇನ್ನು ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ.

ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಇನ್ನು ಪುಷ್ಪಾ ಮತ್ತು ವಿಜಯ್ಕುಮಾರ್ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು.

ಕಳೆದ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ