ಬೆಳಘಟ್ಟದಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ಸಂಭವಿಸಿದೆ. ಪತ್ನಿಯ ಅನೈತಿಕ ಸಂಬಂಧವನ್ನು ಶಂಕಿಸಿ ಪತಿ ಕರಿಯಪ್ಪ ತನ್ನ ಪತ್ನಿಯನ್ನು ಕೊಂದು ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ. ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಪತಿ ಮಮತಾಳ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ನಂತರ ಗುಡಿಹಳ್ಳಿ ಜಮೀನಿನಲ್ಲಿ ತಾನೂ ನೇಣಿಗೆ ಕುತ್ತಿಗೆಯೊಡ್ಡಿ ಕರಿಯಪ್ಪ ಆತ್ಮಹತ್ಯೆ ಮಾಡಿಕೊಂಡ.