ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ

ಮಂಗಳವಾರ, 5 ಏಪ್ರಿಲ್ 2022 (10:35 IST)
ಬೆಂಗಳೂರು: ಪತಿ-ಪತ್ನಿಯರ ನಡುವೆ ಹೊಂದಾಣಿಕೆ ಕೊರತೆಯಿಂದ ಪದೇ ಪದೇ ಜಗಳವಾಗುತ್ತಿತ್ತು. ಆದರೆ ಇದು ಇಷ್ಟಕ್ಕೇ ನಿಲ್ಲದೇ ಕೊಲೆಯಲ್ಲಿ ಅಂತ್ಯವಾಗಿದೆ.

ಜಾರ್ಖಂಡ್ ಮೂಲದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ದಂಪತಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಈ ಬಗ್ಗೆ ದಂಪತಿಗೆ ಕೆಲಸ ನೀಡಿದ್ದ ವ್ಯಕ್ತಿ ಬುದ್ಧಿವಾದ ಹೇಳಿದ್ದ.

ಅದಾದ ಬಳಿಕ ಇಬ್ಬರ ನಡುವೆ ಮತ್ತಷ್ಟು ಜಗಳವಾಗಿದೆ. ಇದೇ ಸಿಟ್ಟಿನಲ್ಲಿ ಪತ್ನಿಯ ಕೊಲೆ ಮಾಡಿದ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ