ರಕ್ತದೊತ್ತಡ ಕಡಿಮೆಯಾಗಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಮೃತ 23 ವರ್ಷ ವಯಸ್ಸಿನ ಜ್ಯೋತಿ ಸಜ್ಜನ್ ಪತಿಯ ಕುಟುಂಬದವರು ಆಕೆಯ ತವರುಮನೆಗೆ ಮಾಹಿತಿ ನೀಡಿದ್ದರು. ಮೂರು ದಿನಗಳ ಹಿಂದೆ ತವರು ಮನೆಯವರು ಆಕೆಯ ಶವಸಂಸ್ಕಾರ ಮಾಡಿದ್ದರು. ಆದರೆ, ನಂತರ ಸಂಶಯ ಬಂದ ಹಿನ್ನೆಲೆಯಲ್ಲಿ ಪೋಷಕರು ಇಳಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜ್ಯೋತಿ ಪತಿ ಶಿವರಾಜ್, ಆಕೆಯ ಅತ್ತೆ ಮತ್ತು ಮೈದುನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.