ಪತ್ನಿ ಕುಟುಂಬಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ!?

ಗುರುವಾರ, 30 ಜೂನ್ 2022 (12:36 IST)
ಯಾದಗಿರಿ : ವಿಚ್ಛೇದನ (ಡೈವೋರ್ಸ್) ಕೊಡಲು ಒಪ್ಪದ ಪತ್ನಿ ವಿರುದ್ಧ ಆಕ್ರೋಶಗೊಂಡ ಆಕೆಯ ಪತಿ, ಸಂಧಾನಕ್ಕೆಂದು ಬಂದಿದ್ದ ನಾಲ್ವರನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿ,
 
ಹೊರಗಿನಿಂದ ಅವರ ಮೇಲೆ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಯಾದಗಿರಿ ಜಿಲ್ಲೆಯ ಕೊಡೆಕಲ್ ಸಮೀಪದ ನಾರಾಯಣಪುರದ ಛಾಯಾ ಕಾಲೋನಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಈ ದುರ್ಘಟನೆಯಲ್ಲಿ ಗಾಯಗೊಂಡಿದ್ದ ನಾಲ್ವರ ಪೈಕಿ ವ್ಯಕ್ತಿಯೊಬ್ಬ ಸುಟ್ಟಗಾಯಗಳಿಂದ ಮೃತಪಟ್ಟಿದ್ದು, ಇನ್ನು ಮೂವರ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.

ಗಾಯಾಳುಗಳನ್ನು ನಾರಾಯಣಪುರ ಸಮೀಪದ ರಾಯಚೂರು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಆರೋಪಿ ಶರಣಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕೋಣೆಯ ಬಾಗಿಲಿಗೆ ಬೀಗ ಹಾಕಿ ಕಿಟಕಿಯ ಮೂಲಕ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಕೃತ್ಯ ನಡೆಸಲಿಂದೇ ಆತ ಪೂರ್ವ ಯೋಜಿತವಾಗಿ ಕ್ಯಾನ್ ಒಂದರಲ್ಲಿ ಪೆಟ್ರೋಲ್ ತಂದು ಸಂಗ್ರಹಿಸಿಟ್ಟಿದ್ದ ಎನ್ನಲಾಗುತ್ತಿದೆ.

ಮನೆಯಲ್ಲಿ ಉರಿಯುತ್ತಿದ್ದ ಬೆಂಕಿ ಕಂಡು ಹಾಗೂ ಚೀರಾಟ ಕೇಳಿ ಅಲ್ಲಿನ ಜನರು, ಬೆಂಕಿ ನಂದಿಸುವ ಪ್ರಯತ್ನ ಕೇಳಿದರಲ್ಲದೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಗಾಯಾಳುಗಳಾದ ಸಿದ್ರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ಶರಣಪ್ಪ ಸರೂರ ಹಾಗೂ ನಾಗಪ್ಪ ಎಂಬುವವರ ಪೈಕಿ, ನಾಗಪ್ಪ ತೀವ್ರ ತರಹದ ಗಾಯಗಳಿಂದ ಮೃತಪಟ್ಟಿದ್ದಾರೆ. ಮೂವರಿಗೆ ಲಿಂಗಸೂಗೂರಿನ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆಂದು ಸಮೀಪದ ರಾಯಚೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ