ಹೈ-ಕ ಅಭಿವೃದ್ಧಿಯ ಹಣ ಮಹಾರಾಷ್ಟ್ರದ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಬಳಕೆ..?

ಮಂಗಳವಾರ, 6 ಜೂನ್ 2017 (09:20 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿಗೆ ನೀಡಿದ್ದ ಅನುದಾನದ ಹಣವನ್ನ ಅಧಿಕಾರಿಗಳು ಮಹಾರಾಷ್ಟ್ರದ ಅಭಿವೃದ್ಧಿಗೆ ಬಳಸಿರುವುದು ಬೆಳಕಿಗೆ ಬಂದಿದೆ.

ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನದ ತಿದ್ದುಪಡಿ ತಂದು ಕೋಟಿ ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ಹಣದಲ್ಲಿ ಸುಮಾರು 84 ಲಕ್ಷ ರೂ. ಹಣವನ್ನ ಮಹಾರಾಷ್ಟ್ರದ ಸೊಲ್ಲಾಪುರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಬಳಸಿರುವುದು ಹೈಕ ಪ್ರದೇಶಾಭಿವೃದ್ಧಿ ಮಂಡಳಿ ಆಂತರಿಕ ಲೆಕ್ಕಪರಿಶೋಧನೆ ವೇಳೆ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕವೇ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ನೀಡಿರುವ ಅನುದಾನದ ಹಣ ವಿನಿಯೋಗವಾಗುತ್ತಿದೆ. ಈ ಹಿಂದೆ ಮಂಡಳಿಯ ಅಧ್ಯಕ್ಷರಾಗಿದ್ದ ಆದಿತ್ಯಾ ಆಮ್ಲಾನ್ ಬಿಸ್ವಾಸ್ ಅವಧಿಯಲ್ಲೇ ರಾಜ್ಯದ ಹಣ ಮಹಾರಾಷ್ಟ್ರ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ವಿನಿಯೋಗವಾಗಿದೆ ಎಂದು ಆರೋಪಿಸಲಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ವೆಬ್ದುನಿಯಾವನ್ನು ಓದಿ