ದೇವೇಗೌಡ, ಕುಮಾರಸ್ವಾಮಿ ಬಿಟ್ಟು ಹೋಗಲ್ಲ: ಚೆಲುವರಾಯ ಸ್ವಾಮಿ

ಬುಧವಾರ, 27 ಆಗಸ್ಟ್ 2014 (15:54 IST)
ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಆಹ್ವಾನ ವಿದ್ದರೂ ದೇವೇಗೌಡ ಮತ್ತು ಕುಮಾರಸ್ವಾಮಿಯನ್ನು ಬಿಟ್ಟು ನಾನು ಹೋಗುವುದಿಲ್ಲ ಎಂದು ಜೆಡಿಎಸ್ ಮುಖಂಡ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
 
ಜೆಡಿಎಸ್-ಬಿಜೆಪಿ ಒಂದಾಗಿ ಸರಕಾರ ರಚಿಸಿದ್ದಾಗ ಜೆಡಿಎಸ್ ಅಧಿಕಾರವಧಿ ಮುಕ್ತಾಯಗೊಂಡ ನಂತರ ಯಡಿಯೂರಪ್ಪಗೆ ಅಧಿಕಾರ ಹಸ್ತಾಂತರಿಸುವಂತೆ ಒತ್ತಾಯಿಸಿದ್ದೆ ಎಂದು ತಿಳಿಸಿದ್ದಾರೆ.
 
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್‌.ಎಂ.ಕೃಷ್ಣ ಅವರಿಂದ ಪಕ್ಷ ಗೆದ್ದಿದೆ ಎಂದು ದೇವೇಗೌಡರು ನೀಡಿರುವ ಹೇಳಿಕೆಯಿಂದ ನೋವಾಗಿದೆ ಎಂದರು.
 
ಏನೇ ಆದರೂ ಜೆಡಿಎಸ್ ತೊರೆದು ಬೇರೆ ಪಕ್ಷವನ್ನು ಸೇರುವ ಉದ್ದೇಶವಿಲ್ಲ ಎಂದು ಮಾಜಿ ಸಂಸದ ಚೆಲುವರಾಯ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.   

ವೆಬ್ದುನಿಯಾವನ್ನು ಓದಿ