ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದ ಮಾಜಿ ಸಿಎಂ ಪುತ್ರ

ಮಂಗಳವಾರ, 28 ಮೇ 2019 (08:07 IST)
ಕಲಬುರ್ಗಿ :ಮೈತ್ರಿ ಸರ್ಕಾರವನ್ನು ಉಳಿಸುವ ಸಲುವಾಗಿ  ಅತೃಪ್ಪ ಶಾಸಕರ ಮನವೊಲಿಸಲು ದೋಸ್ತಿ ನಾಯಕರುಗಳು ಭಾರಿ ಕಸರತ್ತು ನಡೆಸುತ್ತಿದ್ದು, ಅತೃಪ್ಪ ಶಾಸಕರ ಮನವೊಲಿಸಲು ಸಿಎಂ ಕುಮಾರಸ್ವಾಮಿ ಸಚಿವ ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ ಈ ನಡುವೆ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.




ನಮ್ಮ ತಂದೆ ದಿವಂಗತ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದರು. ನಾನು ಕೂಡ ಎರಡು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ. ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.


ಈ ಬಗ್ಗೆ ಪಕ್ಷದ ವರಿಷ್ಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ..ಹಿಂದಿನ ಬಾರಿ ಹೇಳಿದ್ರು ಆ ಹೋಪ್ ಮೇಲೆ ಇದೀವಿ ನೋಡೋಣ ಎಂದಿದ್ದಾರೆ. ಬಿಜೆಪಿಯವರು ನನ್ನ ಸಂಪರ್ಕ ಮಾಡುವ ಪ್ರಶ್ನೆಯೇ ಬರಲ್ಲ, ನಾವು ಪಕ್ಷಕ್ಕೆ ಪ್ರಾಮಾಣಿಕರಾಗಿರುವವರ ಪಟ್ಟಿಯಲ್ಲಿ ಬರ್ತೀವಿ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ