ನಾನು ಮುಂಬೈಗೆ ಹೋಗಲ್ಲ, ಸಚಿವ ಸ್ಥಾನವನ್ನೂ ಕೇಳಲ್ಲ- ರಾಮಲಿಂಗಾರೆಡ್ಡಿ

ಸೋಮವಾರ, 8 ಜುಲೈ 2019 (09:52 IST)
ಬೆಂಗಳೂರು : ಶಾಸಕರು ರಾಜೀನಾಮೆ ನೀಡಿದ್ದ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದು, ಇದೀಗ  ಸಿಎಂ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ‘ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ನನ್ನೊಂದಿಗೆ ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್ ಕಳೆದ 40 ವರ್ಷಗಳಿಂದಲೂ ನನ್ನ ಸ್ನೇಹಿತರು. ಅವರು ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.


ಅಲ್ಲದೇ ಅವರು ಮುಂಬೈಯಲ್ಲಿರುವ ಅತೃಪ್ತ ಶಾಸಕರ ಜೊತೆ ಸೇರಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಅವರು, ನಾನು ಮುಂಬೈಗೆ ಹೋಗಲ್ಲ, ಸಚಿವ ಸ್ಥಾನವನ್ನೂ ಕೇಳಲ್ಲ. ನಾನು ನನ್ನ ರಾಜಕೀಯ ಜೀವನದಲ್ಲಿ ಎಂದೂ ಕೂಡ ಸಚಿವ ಸ್ಥಾನವನ್ನು ಕೇಳಿಲ್ಲ ಎಂದು  ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ