ನಾನು ಯಡಿಯೂರಪ್ಪ ಎರಡು ದೇಹ, ಒಂದೇ ಜೀವ: ಈಶ್ವರಪ್ಪ

ಬುಧವಾರ, 17 ಮೇ 2017 (13:05 IST)
ನಾನು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎರಡು ದೇಹ, ಒಂದೇ ಜೀವವಿದ್ದಂತೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಯೂ-ಟರ್ನ್ ಹೊಡೆದಿದ್ದಾರೆ.
 
ನಮ್ಮ ಜಗಳ ಮುಗಿತು ಇದೀಗ ಕಾಂಗ್ರೆಸ್ ಜಗಳ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬಂದು ಹೋದ್ರೂ ಗೊಂದಲ ನಿಂತಿಲ್ಲ ಎಂದು ವ್ಯಂಗ್ಯವಾಡಿದರು. 
 
ನಮ್ಮ ಜಗಳದಿಂದ ಕಾರ್ಯಕರ್ತರಿಗೆ ನೋವಾಗಿರುವುದು ನಿಜ. ನಮ್ಮ ಸಮಸ್ಯೆ ನೂರಕ್ಕೆ ನೂರರಷ್ಟು ಪರಿಹಾರವಾಗುತ್ತದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ
 
ನಾವು ಯಡಿಯೂರಪ್ಪನವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ತಾಕತಿದ್ರೆ ಕಾಂಗ್ರೆಸ್ ಮುಖಂಡರು ಸಿಎಂ ಅಭ್ಯರ್ಥಿ ಘೋಷಿಸಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸವಾಲ್ ಹಾಕಿದರು
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ