ಜೆಡಿಎಸ್ ಪಕ್ಷ ನಾನು ಬಿಡ್ಲಿಲ್ಲ : ಎಟಿ ರಾಮಸ್ವಾಮಿ

ಶುಕ್ರವಾರ, 31 ಮಾರ್ಚ್ 2023 (14:07 IST)
ಬೆಂಗಳೂರು : ಜೆಡಿಎಸ್ನ ಇನ್ನೊಂದು ವಿಕೆಟ್ ಪತನವಾಗಿದೆ. ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
 
ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ನಾನು ಬಿಡಲಿಲ್ಲ. ಅವರೇ ಹೊರೆಗೆ ಹಾಕಿದ್ರು. ನಾನು ಯಾವತ್ತು ಬಿಡ್ತೀನಿ ಅಂತ ಹೇಳಿಲ್ಲ. ಎಲ್ಲಾ ಪಕ್ಷದಲ್ಲಿ ಲೋಪದೋಷ ಇರುತ್ತವೆ. ನಾನು ಬಲಿಪಶುವಾದೆ. ಹಣದ ಮುಂದೆ ಬಲಿಪಶು ಆಗಿದ್ದೇನೆ. ಅಕ್ರಮವನ್ನು ಎತ್ತಿ ಹಿಡಿದಿದ್ದೇ ನನಗೆ ಮಾರಕವಾಗಿದೆ. ಅದನ್ನು ನಾನು ಸಂತೋಷವಾಗಿ ಸ್ವೀಕಾರ ಮಾಡುತ್ತೇನೆ ಅಂದರು. 

ವೈಯಕ್ತಿಕ ಲಾಭಕ್ಕೆ ಕೆಲಸ ಮಾಡಿಲ್ಲ. ಜನತ ಹಿತಾಸಕ್ತಿ ಕಾಪಾಡಿದ ತೃಪ್ತಿ ನನಗೆ ಇದೆ. ತಪ್ಪನ್ನು ತಪ್ಪು, ಸರಿಯನ್ನು ಸರಿ ಅಂತ ಹೇಳಿದ್ದೇನೆ. ವಿರೋಧಗಳು ಕೂಡಾ ನನ್ನ ಭಾವನೆಗೆ ಸಹಕಾರ ಕೊಟ್ಟಿವೆ. ನನ್ನ ಇವತ್ತಿನ ವಿರೋಧಿಗಳು ಉತ್ತಮ ಆಶಯದೊಂದಿಗೆ ಒಳ್ಳೆಯದು ಮಾಡಲಿ ಎಂದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ