ಬಿಎಸ್ ವೈ ಸರ್ಕಾರ ಬಹಳ ದಿನ ಇರುತ್ತೆ ಎಂಬ ನಂಬಿಕೆ ನನಗಿಲ್ಲ-ಸಿದ್ದರಾಮಯ್ಯ

ಸೋಮವಾರ, 26 ಆಗಸ್ಟ್ 2019 (11:27 IST)
ಹುಬ್ಬಳ್ಳಿ: ಬಿಎಸ್ ವೈ ಸರ್ಕಾರ ಬಹಳ ದಿನ ಇರುತ್ತೆ ಎಂಬ ನಂಬಿಕೆ ನನಗಿಲ್ಲ, ರೆಬಲ್ ಗಳನ್ನು ಇಟ್ಟುಕೊಂಡು ಸರ್ಕಾರ ಮುನ್ನಡೆಸೋಕ್ಕಾಗುತ್ತಾ? ಹಾಲು ಕುಡಿದ ಮಕ್ಕಳೇ ಬದುಕಲ್ಲ, ವಿಷ ಕುಡಿದವರು ಬದುಕ್ತಾರಾ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




ಹುಬ್ಬಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ನೆರೆ ಪೀಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ ಅವರು ದೆಹಲಿ-ಬೆಂಗಳೂರು ಟೂರ್ ಮಾಡುತ್ತಿದ್ದಾರೆ. ಭಾರಿ ಹಾನಿಯಾದ್ರೂ ಪರಿಹಾರ ತರುವಲ್ಲಿ ಕೆಲಸ ಮಾಡಿಲ್ಲ. ಬಿಜೆಪಿಯವರು ವಾಮ ಮಾರ್ಗದಲ್ಲಿ ಸರ್ಕಾರ ರಚನೆ ಮಾಡಿದ್ದಾರೆ. ಸರ್ಕಾರ ರಚನೆಯಾದ ಮೇಲಾದ್ರೂ ಜನರ ಕಡೆ ನೋಡಬೇಕು ಎಂದಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಅಲ್ಲದೇ ಬಸವರಾಜು, ಸೋಮಶೇಖರ್ ರನ್ನು ನಾನು ಕಳಿಸಿದೆ ಅಂತಾರೆ, ಹಾಗಾದ್ರೆ ಜೆಡಿಎಸ್ ನಲ್ಲಿದ್ದ ಹೆಚ್. ವಿಶ್ವನಾಥ್, ನಾರಾಯಣ ಗೌಡ, ಗೋಪಾಲಯ್ಯ ರನ್ನು ಮುಂಬೈಗೆ ಕಳುಹಿಸಿದವರು ಯಾರು? ಎಂದು ಪ್ರಶ್ನಿಸಿದ ಅವರು ಹೆಚ್.ಡಿ. ದೇವೇಗೌಡರು ಹಾಗೂ ಕುಮಾರಸ್ವಾಮಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ