ಪೂಜಾರಿ ಹೇಳಿಕೆಗೆ ಐ ಡೋಂಟ್ ವಾಂಟೂ ರಿಆ್ಯಕ್ಟ್ ಎಂದು ಸಿಎಂ ಸಿದ್ದರಾಮಯ್ಯ

ಗುರುವಾರ, 29 ಡಿಸೆಂಬರ್ 2016 (11:17 IST)
ನಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಖಚಿತ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಐ ಡೋಂಟ್ ವಾಂಟೂ ರಿಆ್ಯಕ್ಟ್ ಎಂದು ಖಾರವಾಗಿ ಉತ್ತರಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅವರಿಗೆ ನಜನಗೂಡಿನ ಬಗ್ಗೆ ಗೊತ್ತಿಲ್ಲ. ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಸೋಲು ಖಚಿತ ಎಂದು ಹೇಳಿದರೆ ಜನ ಕೇಳ್ತಾರಾ?. ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದರು. 
 
ನಾವು ಇಲ್ಲೆ ಇದ್ದು ನಂಜನಗೂಡು ಉಪಚುನಾವಣೆ ಕುರಿತು ಭವಿಷ್ಯ ನುಡಿಯಲು ಆಗುವುದಿಲ್ಲ. ಅಂತದ್ರಲ್ಲಿ ಪೂಜಾರಿ ಅವರು ಮಂಗಳೂರಿನಲ್ಲಿ ಕುಳಿತು ಉಪಚುನಾವಣೆ ಕುರಿತು ಭವಿಷ್ಯ ನಡಿಯಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. 
 
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ಪೂಜಾರಿ ಭವಿಷ್ಯ ನುಡಿದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ