ಸ್ವಾಭಿಮಾನದ ಕಿಚ್ಚು ಎಲ್ಲರಿಗಿಂತ ನನಗೆ ಹೆಚ್ಚು: ಸತೀಶ್ ಜಾರಕಿಹೊಳಿ

ಬುಧವಾರ, 19 ಏಪ್ರಿಲ್ 2017 (20:48 IST)
ಸ್ವಾಭಿಮಾನದ ಕಿಚ್ಚು ಎಲ್ಲರಿಗಿಂತ ನನಗೆ ಹೆಚ್ಚಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಹೋದರ ಲಖನ್ ಜಾರಕಿಹೊಳಿ ಚರಿತ್ರೆ ತಿಳಿಯಬೇಕಾದರೆ ಪಟ್ಟಣದಲ್ಲಿರುವ ಯಾವುದೇ ಬಾರ್‌ಗೆ ಹೋಗಿ ಕುಳಿತುಕೊಳ್ಳಿ. ಅಲ್ಲಿ ಅವರ ಚರಿತ್ರೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
 
ಸಹೋದರ ಲಖನ್ ಎಷ್ಟೇ ತಿಪ್ಪರಲಾಗ ಹಾಕಿದರೂ ಯಮಕನಮರಡಿ ವಿಧಾನಸಭಾ ಕ್ಷೇತ್ರವನ್ನು ಬಿಟ್ಟುಕೊಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ