ಜಾರಕಿಹೋಳಿ ರಾಜೀನಾಮೆ ಹಿಂಪಡೆಯುವ ವಿಶ್ವಾಸವಿದೆ: ಪರಮೇಶ್ವರ್

ಶುಕ್ರವಾರ, 30 ಜನವರಿ 2015 (14:31 IST)
ನಾಳೆ ಅಬಕಾರಿ ಸಟಿವ ಸತೀಶ್ ಜಾರಕಿಹೋಳಿ ಅವರು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದು, ರಾಜೀನಾಮೆ ಪತ್ರವನ್ನು ಹಿಂಪಡೆಯುವ ವಿಶ್ವಾಸವಿದೆ ಎಂದು ರಾಜ್ಯ ಪ್ರಾದೇಶಿಕ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಡಾ.ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ನಗರದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯನವರೊಂದಿಗೆ ಜಾರಕಿಹೋಳಿ ಅವರ ಜಿಲ್ಲಾ ಬೆಂಬಲಿಗ ಮುಖಂಡರೆಲ್ಲರೂ ಮಾತುಕತೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯನವರೂ ಕೂಡ ಸಮಸ್ಯೆ ಇತ್ಯರ್ಥಕ್ಕೆ ಒಪ್ಪಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಜಾರಕಿಹೋಳಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾಳೆ ಅವರು ರಾಜಧಾನಿಗೆ ಬಂದು ತಮ್ಮ ರಾಜಿನಾಮೆ ಪತ್ರವನ್ನು ಹಿಂಪಡೆಯಲಿದ್ದಾರೆ ಎಂದು ವಿಶ್ವಾಸದಿಂದ ನುಡಿದರು. 
 
ನಿನ್ನೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆಯು ಫಲಪ್ರದವಾಗುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. 

ವೆಬ್ದುನಿಯಾವನ್ನು ಓದಿ