ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ನಾನು ಯಾವುದೇ ದಾಖಲೆಗಳಿಲ್ಲದೆ ಮಾತನಾಡುವವನಲ್ಲ. ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ನಾನು ಯಾರ ರಾಜೀನಾಮೆ ಹಾಗೂ ಯಾರನ್ನು ಬಂಧಿಸುವಂತೆ ಒತ್ತಾಯಿಸಿಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಕೇಳಲು ನಿಮಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸುತ್ತಾರೆ ಎಂದು ಹೇಳಿದರು.