ಉಸ್ತುವಾರಿ ನೇಮಕ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ : ಅಶ್ವಥ್ ನಾರಾಯಣ್

ಮಂಗಳವಾರ, 14 ಫೆಬ್ರವರಿ 2023 (16:18 IST)
ಮಂಡ್ಯ : ಯಾವುದೇ ಜಿಲ್ಲೆಯ ಉಸ್ತುವಾರಿ ನಿಶ್ಚಯ ಮಾಡುವುದು ಸಿಎಂ. ಮಂಡ್ಯ ಉಸ್ತುವಾರಿ ನೇಮಕ ವಿಚಾರದಲ್ಲಿ ನನಗೆ ಮಾಹಿತಿ ಇಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ನೀಡಿದ್ದಾರೆ.
 
ಇಲ್ಲಿನ ಸಾತನೂರಿನ ಕಂಬದ ನರಸಿಂಹ ದೇವಸ್ಥಾನದ ಬಳಿ ನಡೆದ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಚಿವರು, ಮಂಡ್ಯ ಉಸ್ತುವಾರಿ ಬಗ್ಗೆ ಕೇಳಿದರೆ ನನಗೆ ಗೊತ್ತಿಲ್ಲ. ಎಲ್ಲವನ್ನು ಸಿಎಂ ನೋಡಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಉಸ್ತುವಾರಿ ವಹಿಸಿಕೊಳ್ಳಲು ಹಿಂದೆ ಸರಿದಿದ್ದಾರೆ.

ಮಂಡ್ಯ ಜಿಲ್ಲೆಯ ಮೇಲೆ ನನಗೆ ಪ್ರೀತಿ ಬಾಂಧವ್ಯ ಇರುವುದು ಒಂದು ಭಾಗವಾದರೇ ಜವಾಬ್ದಾರಿ ಮತ್ತು ಆಡಳಿತ ಇನ್ನೊಂದು ಭಾಗ. ಇವತ್ತು ಪಕ್ಷದ ಕಾರ್ಯಕ್ರಮ ಇರುವುದರಿಂದ ಇಲ್ಲಿಗೆ ಬಂದಿದ್ದೇನೆ. ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಇಲ್ಲಿದ್ದೇನೆ ಎಂದು ಹೇಳಿದರು.

ಖಾಲಿ ಇರುವ ಉಸ್ತುವಾರಿಯನ್ನು ಸದ್ಯ ಸಿಎಂ ನಿರ್ವಹಣೆ ಮಾಡುತ್ತಿದ್ದಾರೆ. ಯಾವ ಕಾಲದಲ್ಲಿ ಏನು ಮಾಡಬೇಕು ಎಂದು ಸಿಎಂ ನಿಶ್ಚಯ ಮಾಡುತ್ತಾರೆ. ಸಿಎಂ ಯಾರನ್ನು ನಿಶ್ಚಯ ಮಾಡುತ್ತಾರೋ ಅವರು ಕೆಲಸ ಮಾಡುತ್ತಾರೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಪಕ್ಷಕ್ಕೆ ಸರ್ಕಾರ ಸಹಕಾರ ನೀಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ