ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ- ಎಸ್.ಟಿ.ಸೋಮಶೇಖರ್

ಗುರುವಾರ, 11 ಜುಲೈ 2019 (10:33 IST)
ಬೆಂಗಳೂರು : ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ಸುಮಾರು 1 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ.



ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಎಲ್ಲಿಯೂ ಹೋಗಿಲ್ಲ. ಈಗ ಬೆಂಗಳೂರಿಗೆ ಬಂದಿದ್ದೇನೆ. ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ ಎಂದು ಹೇಳಿದರು.
ಅಲ್ಲದೇ ಇಂದು ಕರ್ನಾಟಕ ವಸತಿ ಮಹಾಮಂಡಳಿ ಚುನಾವಣೆ ಹಿನ್ನೆಲೆ ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ