ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಬೇಕೆಂಬ ಸಿದ್ಧಾಂತ ನಮ್ಮದು. ಪ್ರಧಾನಿಗಳೇ ಕಪ್ಪು ಹಣ ಇದ್ದವರನ್ನ ಹೊರಗೆಳೆಯಿರಿ. ಅವರ ನಿದ್ದೆಗೆಡಿಸಿ. ಆದರೆ ಬಡವರ ನಿದ್ದೆಗೆಡಿಸಬೇಡಿ. ಬ್ಯಾಂಕ್ ಗಳ ಮುಂದೆ ಶ್ರೀಮಂತರು ಕ್ಯೂ ನಿಂತಿಲ್ಲ. ಸಾಲುಗಟ್ಟಿ ನಿಂತವರೆಲ್ಲ ಬಡವರು ಮತ್ತು ಮಧ್ಯಮ ವರ್ಗದವರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳು ಎಂದು ಮುಖ್ಯಮಂತ್ರಿಗಳು ನುಡಿದರು.