ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರಿಂದ, ಸಚಿವರಾಗುವವರ ಸಾಲಿನ ಪಟ್ಟಿ ಕೂಡಾ ಉದ್ದವಾಗಿದೆ.
ಸಚಿವ ಸ್ಥಾನಕ್ಕಾಗಿ ಡಿ.ವಿ.ಸದಾನಂದಗೌಡ ಮತ್ತು ಯಡಿಯೂರಪ್ಪ ಬಳಗದ ಮಧ್ಯೆ ಹಣಾಹಣಿ ನಡೆಯುವ ಸಾಧ್ಯತೆಗಳು ಕಂಡು ಬರುತ್ತಿವೆ. ನಾನೊಬ್ಬ ಪ್ರಾಮಾಣಿಕ ವ್ಯಕ್ತಿ ಶುದ್ದಹಸ್ತ, ಯಾವುದೇ ರೀತಿಯ ಭ್ರಷ್ಟಾಚಾರದ ಆರೋಪಗಳು ನನ್ನ ಮೇಲಿಲ್ಲ ಎಂದು ಆಗಾಗ ಯಡ್ಡಿಗೆ ಟಾಂಗ್ ಕೊಡುತ್ತಿದ್ದಾರೆ.